ಬೆಂಗಳೂರು (ಆ.17): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಆಗಮಿಸುವ ಸಾರ್ವಜನಿಕರು ಇನ್ನು ಮುಂದೆ ಮೊಬೈಲ್ಗಳನ್ನು ತರುವಂತಿಲ್ಲ. ಆರ್.ಟಿ.ನಗರದಲ್ಲಿರುವ ಅವರ ನಿವಾಸದ ಬಳಿ ಮೊಬೈಲ್ ನಿಷೇಧಿಸಲಾಗಿದೆ ಎಂಬ ಫಲಕ ಅಳವಡಿಸಲಾಗಿದೆ. ಭೇಟಿ ಮಾಡಲು ಬರುವ ಸಾರ್ವಜನಿಕರು ಮುಖ್ಯಮಂತ್ರಿಗಳೊಂದಿಗೆ ಸೆಲ್ಫಿ ಪಡೆದುಕೊಳ್ಳಲು ಮುಂದಾಗುತ್ತಿರುವುದರಿಂದ ಅಹವಾಲು ಅಲಿಸಲು ತೊಂದರೆಯಾಗುತ್ತಿದೆ.