Bangalore: ಜನಸಂಖ್ಯಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಉತ್ತರ ಪ್ರದೇಶ ಹಾಗೂ ಅಸ್ಸಾಂ ಮಾದರಿಯ ಜನಸಂಖ್ಯಾ ನೀತಿ ಕರ್ನಾಟಕದಲ್ಲೂ ಜಾರಿಗೊಳ್ಳುತ್ತಾ ಎಂಬ ಚರ್ಚೆಗಳು ಆರಂಭಗೊಂಡಿವೆ. ರಾಜ್ಯದಲ್ಲಿ ಈ ಕುರಿತಾಗಿ ಸರ್ಕಾರ ಯಾವುದೇ ಹೇಳಿಕೆ ನೀಡದಿದ್ದರೂ ಮಾಜಿ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ವ್ಯಕ್ತಪಡಿಸಿದ ಅಭಿಪ್ರಾಯ ಅನುಮಾನಗಳಿಗೆ ಕಾರಣವಾಗಿದೆ.