ಬೆಂಗಳೂರು : ಬಾಲಕೋಟ್ ವೈಮಾನಿಕ ದಾಳಿಯನ್ನು ಬಿಜೆಪಿಯ ಸಾಧನೆ ಎನ್ನುವ ರೀತಿಯಲ್ಲಿ ಬಿಂಬಿಸಿ ಮತ ಯಾಚನೆ ಮಾಡಿದ ಆರೋಪದ ಮೇಲೆ ಬೆಂಗಳೂರು ದಕ್ಷಿಣ ಕ್ಷೇತ್ರದ ಲೋಕಸಭಾ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ತೇಜಸ್ವಿ ಸೂರ್ಯ ಅವರು ಭಾರತೀಯ ಸೇನೆಯು ಪುಲ್ವಾಮಾದಲ್ಲಿ ನಡೆದ ಘಟನೆಗೆ ಪ್ರತೀಕಾರವಾಗಿ ಪಾಕಿಸ್ತಾನದ ನೆಲದಲ್ಲಿ ನಡೆಸಿದ್ದ ವಾಯು ದಾಳಿಯನ್ನು ಉಲ್ಲೇಖಿಸಿ ಕರಪತ್ರ ಮುದ್ರಿಸಿ, ಹಂಚಿಕೆ ಮಾಡಿ ಮತಯಾಚನೆ ಮಾಡಿದ್ದರು. ಈ ಹಿನ್ನಲೆಯಲ್ಲಿ