ಲೋಕ ಸಮರ ತಾರಕಕ್ಕೇ ಏರಿರುವಂತೆ ಪ್ರಚಾರದ ಭರಾಟೆಯ ನಡುವೆಯೇ ಪಕ್ಷಾಂತರ ಪರ್ವವೂ ಮುಂದುವರಿದಿದೆ.ಚಾಮರಾಜನಗರ ಲೋಕಸಭಾ ಚುನಾವಣೆ ಕಣದಲ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ಶುರುವಾಗಿದೆ. ಜೆಡಿಎಸ್ ಪಕ್ಷ ತೊರೆದು ಬಿಜೆಪಿ ಪಕ್ಷ ಸೇರಿದ್ದಾರೆ ಕುರುಬ ಸಮುದಾಯ ಮುಖಂಡರು. ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಮುಸುವಿನಕೊಪ್ಪಲು ಗ್ರಾಮದ ಮುಖಂಡರು ಬಿಜೆಪಿಯತ್ತ ಮುಖಮಾಡಿದ್ದಾರೆ. ಬಿಜೆಪಿ ಮುಖಂಡ ಸಿ.ಬಸವೇಗೌಡ ಮತ್ತು ಜಿಪಂ ಮಾಜಿ ಉಪಾಧ್ಯಕ್ಷ ನಟರಾಜು ನೇತೃತ್ವದಲ್ಲಿ ಕಮಲ ಪಡೆ ಸೇರಿದ ಜೆಡಿಎಸ್ ಮುಖಂಡರು ಬಿಜೆಪಿ