ಬೆಂಗಳೂರು : ಕಲ್ಲುಸಕ್ಕರೆ ತಿನ್ನಲು ಎಷ್ಟು ಸಿಹಿಯಾಗಿದೆಯೋ ಆರೋಗ್ಯಕ್ಕೂ ಕೂಡ ಅಷ್ಟೇ ಉತ್ತಮ. ಇದರಲ್ಲಿ ಅನೇಕ ಆರೋಗ್ಯಕರ ಅಂಶಗಳು ಅಡಗಿರುತ್ತದೆ. ಅನೇಕ ರೋಗಗಳಿಗೆ ಇದು ರಾಮಾಬಾಣವಾಗಿದೆ. ಕಲ್ಲುಸಕ್ಕರೆಯ ಸೇವೆನೆಯಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ. ಇದು ಹಿಮೋಗ್ಲೋಬಿನ್ನ್ನು ಹೆಚ್ಚಿಸಿ ರಕ್ತಹೀನತೆಯ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಗಂಟಲು ನೋವಿದ್ದರೂ ಕಲ್ಲುಸಕ್ಕರೆಯನ್ನು ತಿನ್ನುವುದರಿಂದ ತಕ್ಷಣ ಪರಿಹಾರ ಕಾಣಬಹುದು. ಹಾಗೆಯೇ ಕೆಮ್ಮಿನ ಸಮಸ್ಯೆಗೆ ಕಲ್ಲುಸಕ್ಕರೆಯೇ ರಾಮಬಾಣವಾಗಿದೆ. ಒಣಕೆಮ್ಮು ಮತ್ತು ಹಸಿಕೆಮ್ಮಿನ ಸಮಸ್ಯೆಗಳಿಗೆ ಪರಿಹಾರವಾಗಿ ಕಲ್ಲುಸಕ್ಕರೆಯನ್ನು ತಿನ್ನುವುದು ಉತ್ತಮ.