ಬಾಂಗ್ಲಾದೇಶದ ಟ್ರೀ ಮ್ಯಾನ್ ಎಂದೇ ಕರೆಯಲಾಗುವ ರಿಕ್ಷಾ ಚಾಲಕ ಅಬುಲ್ ಬಜಂದಾರ್, ಸುಮಾರು 10 ವರ್ಷಗಳಿಂದ ಎಪಿಡರ್ಮಾಡಿಸ್ಪ್ಲಾಸಿಯಾ ವೆರ್ರುಕಫಾರ್ಮಿಸ್ ಎಂಬ ವಿಚಿತ್ರ ರೋಗದಿಂದ ಬಳಲುತ್ತಿದ್ದು, ಡಾಕಾದಲ್ಲಿರುವ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ರೋಗದಿಂದ ಅವರ ಕೈ ಬೆರಳು ಮತ್ತು ಕಾಲಿನ ಬೆರಳುಗಳು ಸಂಪೂರ್ಣವಾಗಿ ಮರದ ತೊಗಟೆಯ ರೀತಿಯಲ್ಲಿ ಬದಲಾವಣೆಯಾಗಿದ್ದವು, ಅಲ್ಲದೇ ಆಸ್ಪತ್ರೆಯ ವೈದ್ಯರಿಗೂ ಸಹ ಈ ಕಾಯಿಲೆಯನ್ನು ಗುಣಪಡಿಸುವುದು ದೊಡ್ಡ ಸವಾಲಾಗಿತ್ತು ಎನ್ನಲಾಗಿದೆ.