ದುಬೈ: ಐಪಿಎಲ್ 13 ರಲ್ಲಿ ಮತ್ತೆ ಕಳಪೆ ಅಂಪಾಯರಿಂಗ್ ಸುದ್ದಿಯಾಗಿದೆ. ನಿನ್ನೆಯ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ನಾಯಕ ಡೇವಿಡ್ ವಾರ್ನರ್ ಗೆ ಡಿಆರ್ ಎಸ್ ತೆಗೆದುಕೊಳ್ಳುವ ವಿಚಾರದಲ್ಲಿ ಪ್ರಭಾವ ಬೀರಿದ್ದಕ್ಕೆ ಅಂಪಾಯರ್ ಅನಿಲ್ ಚೌಧರಿ ಟೀಕೆಗೆ ಗುರಿಯಾಗಿದ್ದಾರೆ. ಡೆಲ್ಲಿ ಬ್ಯಾಟ್ಸ್ ಮನ್ ರವಿಚಂದ್ರನ್ ಅಶ್ವಿನ್ ವಿರುದ್ಧ ಎಲ್ ಬಿಡಬ್ಲ್ಯು ಮನವಿಯನ್ನು ಅಂಪಾಯರ್ ಪುರಸ್ಕರಿಸದಿದ್ದಾಗ ಹೈದರಾಬಾದ್ ನಾಯಕ ಡೇವಿಡ್ ವಾರ್ನರ್ ಡಿಆರ್ ಎಸ್ ಗೆ ಮನವಿ ಸಲ್ಲಿಸಲು ಹೊರಟಿದ್ದರು. ಆದರೆ