ನವದೆಹಲಿ: ಬಜೆಟ್ 2019: ಲೋಕಸಭೆ ಚುನಾವಣೆಯಲ್ಲಿ ಬಹುಮತ ಪಡೆದು ಅಧಿಕಾರಕ್ಕೆ ಬಂದಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರಕಾರ ಮೊತ್ತ ಮೊದಲ ಬಾರಿಗೆ ಬಜೆಟ್ ಮಂಡನೆ ಮಾಡುತ್ತಿದೆ. ವಿತ್ತಸಚಿವೆ ನಿರ್ಮಲಾ ಸೀತರಾಮನ್ ಬಜೆಟ್ ಮಂಡಿಸಿದ್ದು ಇದೊಂದು ಜನಪರ ಬಜೆಟ್ ಎಂದು ಹೇಳಿದರಾದರೂ ಮಧ್ಯಮ ವರ್ಗಕ್ಕೆ ತೆರಿಗೆ ವಿನಾಯತಿಯಲ್ಲಿ ಹೆಚ್ಚಳ ಘೋಷಿಸದೆ ನಿರಾಸೆ ಮೂಡಿಸಿದ್ದಾರೆ ಎನ್ನುವುದು ಜನರ ಅಭಿಪ್ರಾಯವಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಚೊಚ್ಚಲ ಬಜೆಟ್ನಲ್ಲಿ ವೇತನ ಪಡೆಯುವ ನೌಕರರ