ಬೆಂಗಳೂರು: ಕಾಟೇರ ಸಿನಿಮಾದ ಪ್ರದರ್ಶನಕ್ಕಾಗಿ ದುಬೈಗೆ ತೆರಳಿರುವ ನಟ ದರ್ಶನ್ ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ ಫೋಟೋ ಮತ್ತು ಅದರ ಜೊತೆಗೆ ಅವರು ಬರೆದಿದ್ದ ಸಂದೇಶ ಎಲ್ಲರ ಗಮನ ಸೆಳೆದಿದೆ. ದುಬೈನಲ್ಲಿ ಅಲ್ಲಿನ ಕನ್ನಡಿಗ ಸ್ನೇಹಿತರ ಜೊತೆ ದರ್ಶನ್ ಖುಷಿಯಾಗಿ ಕಾಲ ಕಳೆಯುತ್ತಿದ್ದಾರೆ. ಈ ನಡುವೆ ಬೆಂಗಳೂರಿನಲ್ಲಿ ಅವರ ವಿರುದ್ಧ ಪಬ್ ನಲ್ಲಿ ರಾತ್ರಿಯಿಡೀ ಪಾರ್ಟಿ ಮಾಡಿದ್ದಕ್ಕೆ ಕೇಸ್ ದಾಖಲಾಗಿದೆ. ದರ್ಶನ್ ಸೇರಿದಂತೆ ಅಭಿಷೇಕ್ ಅಂಬರೀಶ್, ಚಿಕ್ಕಣ್ಣ, ನೀನಾಸಂ ಸತೀಶ್, ರಾಕ್ ಲೈನ್ ವೆಂಕಟೇಶ್, ಡಾಲಿ ದನಂಜಯ್ ಸೇರಿದಂತೆ 8 ಮಂದಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ.