ಬೆಂಗಳೂರು: ಬಿಗ್ ಬಾಸ್ ಕನ್ನಡ ಮಾಜಿ ಸ್ಪರ್ಧಿ, ನಟಿ ಚೈತ್ರಾ ಮದುವೆಯಾಗಿದ್ದಾರೆ. ಆದರೆ ಮದುವೆಯಾದ ಬೆನ್ನಲ್ಲೇ ಚೈತ್ರಾ ಮದುವೆ ಸುತ್ತ ವಿವಾದ ಹತ್ತಿಕೊಂಡಿದೆ. ಚೈತ್ರಾ ಮಂಡ್ಯ ಮೂಲದ ನಾಗಾರ್ಜುನ ಎಂಬವರನ್ನು ಕೋಲಾರದ ದೇವಾಲಯವೊಂದರಲ್ಲಿ ಮದುವೆಯಾಗಿದ್ದು, ಮದುವೆಯಾದ ಸಂಜೆಯೇ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಚೈತ್ರಾ ಬಲವಂತವಾಗಿ ನಾಗಾರ್ಜುನ ಅವರನ್ನು ಮದುವೆಯಾಗಿದ್ದಾರೆ ಎಂದು ವರನ ಕಡೆಯವರು ಗಲಾಟೆ ಮಾಡಿದ್ದಾರೆ. ನಾಗಾರ್ಜುನನಿಗೆ ಮದುವೆಯಾಗಲು ಇಷ್ಟವಿರಲಿಲ್ಲ. ಹಾಗಿದ್ದರೂ ಬಲವಂತವಾಗಿ ಮದುವೆಯಾಗಿದ್ದಾರೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಲ್ಲದೆ,