ಬೆಂಗಳೂರು: ಲವ್ ಯೂ ರಚ್ಚು ಸಿನಿಮಾ ಶೂಟಿಂಗ್ ವೇಳೆ ಫೈಟರ್ ವಿವೇಕ್ ದುರಂತ ಸಾವನ್ನಪ್ಪಿರುವ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ ಬೊಮ್ಮಾಯಿ ಚಿತ್ರೀಕರಣಕ್ಕೆ ಖಡಕ್ ನಿಯಮಗಳನ್ನು ಜಾರಿಗೆ ತರಲು ಚಿಂತನೆ ನಡೆಸಿರುವುದಾಗಿ ಹೇಳಿದ್ದಾರೆ. ಚಿತ್ರೀಕರಣದಲ್ಲಿ ಇತ್ತೀಚೆಗೆ ಹಲವು ದುರಂತ ಪ್ರಕರಣಗಳು ನಡೆದಿರುವ ಉದಾಹರಣೆಗಳು ನಮ್ಮ ಮುಂದಿವೆ. ಹೀಗಾಗಿ ಇನ್ನು ಮುಂದೆ ಚಿತ್ರೀಕರಣ ನಡೆಸಲು ಕೆಲವು ಹೊಸ ನಿಯಮಗಳನ್ನು ಜಾರಿಗೆ ತರಲಿದ್ದೇವೆ. ಇದರ ಬಗ್ಗೆ ಸದ್ಯದಲ್ಲೇ ಆದೇಶ ನೀಡಲಿದ್ದೇವೆ ಎಂದು