ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರವ ಸರ್ಜಾ ಅಭಿನಯದ ಇದೇ ಶುಕ್ರವಾರ ಬಿಡುಗಡೆಯಾಗಿದ್ದ ಪೊಗರು ಸಿನಿಮಾದಲ್ಲಿನ ದೃಶ್ಯವೊಂದರ ಬಗ್ಗೆ ಬ್ರಾಹ್ಮಣರ ಸಮುದಾಯ ಆಕ್ಷೇಪ ವ್ಯಕ್ತಪಡಿಸಿದೆ.ಈ ಚಿತ್ರದ ದೃಶ್ಯವೊಂದರಲ್ಲಿ ವಿಲನ್ ಪಾತ್ರಧಾರಿ ಹೋಮ ಮಾಡುತ್ತಿದ್ದ ಬ್ರಾಹ್ಮಣ ಹೆಗಲ ಮೇಲೆ ಕಾಲಿಟ್ಟು ತುಳಿಯುವ ದೃಶ್ಯವಿದೆ. ಇದು ಬ್ರಾಹ್ಮಣರಿಗೆ ಮಾಡಿದ ಅವಮಾನ ಎಂದು ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಆಕ್ಷೇಪಿಸಿದ್ದಾರೆ. ಅಲ್ಲದೆ, ಚಿತ್ರತಂಡ ಬ್ರಾಹ್ಮಣರ ಕ್ಷಮೆ ಕೇಳಬೇಕು, ಇಲ್ಲದೇ ಹೋದರೆ ವಾಣಿಜ್ಯ ಮಂಡಳಿಗೆ