ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಯುವರತ್ನ ಸಿನಿಮಾ ಈಗಾಗಲೇ ಚಿತ್ರೀಕರಣ ಮುಕ್ತಾಯಗೊಳಿಸಿದ್ದು, ಅಭಿಮಾನಿಗಳು ಬಿಡುಗಡೆ ಯಾವಾಗ ಎಂದು ನಿರ್ದೇಶಕ ಸಂತೋಷ್ ಆನಂದ್ ರಾಮ್ ಗೆ ಪ್ರಶ್ನೆ ಮಾಡುತ್ತಲೇ ಇರುತ್ತಾರೆ. ಸಿನಿಮಾ ಇಲ್ಲದೇ ಹೋದರೂ ಕನಿಷ್ಠ ಪಕ್ಷ ರಾಜ್ಯೋತ್ಸವಕ್ಕೆ ಹಾಡುಗಳನ್ನಾದರೂ ರಿಲೀಸ್ ಮಾಡಿ ಎಂದು ದಂಬಾಲು ಬೀಳುತ್ತಿದ್ದಾರೆ. ಇವರಿಗೆ ತಮ್ಮ ಕಷ್ಟವೇನೆಂದು ಸಂತೋಷ್ ಆನಂದ್ ರಾಮ್ ವಿವರಿಸಿದ್ದಾರೆ. ಸಿನಿಮಾ ಬಿಡುಗಡೆ ದಿನಾಂಕ ಪಕ್ಕಾ ಆಗದೇ ನಾವು ಹಾಡಿನ ಬಿಡುಗಡೆ