ಬೆಂಗಳೂರು: ದೆಹಲಿ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೊಳಗಾದ ಆರೋಪಿಗಳಿಗೆ ಶಿಕ್ಷೆ ಜಾರಿಗೊಳಿಸಲು ನೆರವಾಗುತ್ತಿರುವ ಹೊಣೆ ಹೊತ್ತಿರುವ ಪವನ್ ಜಲ್ಲಾದ್ ಜೀವನದ ಸಂಕಷ್ಟಕ್ಕೆ ನೆರವಾಗಲು ನಟ ಜಗ್ಗೇಶ್ ಮುಂದಾಗಿದ್ದಾರೆ. ನಿರ್ಭಯಾ ಹಂತಕರನ್ನು ಗಲ್ಲಿಗೇರಿಸಲಿರುವ ಹ್ಯಾಂಗ್ ಮ್ಯಾನ್ ಪವನ್ ಜಲ್ಲಾದ್ ಮೂಲತಃ ಉತ್ತರ ಪ್ರದೇಶದವರು. ಅವರ ವೈಯಕ್ತಿಕ ಜೀವನದಲ್ಲಿ ಸಂಕಷ್ಟಗಳ ಸರಮಾಲೆಯೇ ಇದೆ. ಆರ್ಥಿಕವಾಗಿ ಸಂಕಷ್ಟದಲ್ಲಿರುವ ಪವನ್ ಮಗಳ ಮದುವೆ ಮಾಡಿಸಲು ಪರದಾಡುತ್ತಿದ್ದಾರೆ. ಯಾವುದಾದರೂ ಒಂದು ದಾರಿ ತೋರಿಸಲು ಎಂದು ದೇವರಲ್ಲಿ