ಬೆಂಗಳೂರು: ಕನ್ನಡ ಕಿರುತೆರೆ ವಾಹಿನಿಯಲ್ಲಿ ಕನ್ನಡ ಧಾರವಾಹಿಗಳನ್ನು ನಿಲ್ಲಿಸಿ ಡಬ್ಬಿಂಗ್ ಧಾರವಾಹಿಗಳಿಗೆ ಅನುವು ಮಾಡಿಕೊಡುತ್ತಿರುವುದರ ಬಗ್ಗೆ ದಿನೇ ದಿನೇ ಆಕ್ರೋಶ ಹೆಚ್ಚಾಗುತ್ತಿದೆ.ಮೊನ್ನೆಯಷ್ಟೇ ನಟ ತೇಜಸ್ ಡಬ್ಬಿಂಗ್ ಧಾರವಾಹಿಗಳ ಬಗ್ಗೆ ಬಹಿರಂಗ ಧ್ವನಿಯೆತ್ತಿದ್ದರು. ಇದೀಗ ಕಿರುತೆರೆ ಬರಹಗಾರ ಸಚೇತ್ ಭಟ್ ಎಂಬವರು ತಮ್ಮ ಸಾಮಾಜಿಕ ಜಾಲತಾಣ ಪುಟದ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಡಬ್ಬಿಂಗ್ ಧಾರವಾಹಿಗಳನ್ನು ಪ್ರೋತ್ಸಾಹಿಸುವವರಿಗೆ ಕೆಲವು ವಿಚಾರಗಳು ಅರ್ಥವಾಗುವುದೇ ಇಲ್ಲ. ನೂರಾರು ಕನ್ನಡ ಕಲಾವಿದರು, ತಂತ್ರಜ್ಞರು ಇಂದು ಕೆಲಸ ಕಳೆದುಕೊಂಡು ಬೀದಿಗೆ