ಬೆಂಗಳೂರು: ನಿನ್ನೆಯಷ್ಟೇ ಬರ್ತ್ ಡೇ ಆಚರಿಸಿಕೊಂಡಿದ್ದ ನಟ ಕಿಚ್ಚ ಸುದೀಪ್ ಇಂದು ನಾಡದೇವತೆ ಚಾಮುಂಡಿ ದೇವಿಯ ದರ್ಶನ ಮಾಡಿದ್ದಾರೆ.ಇಂದು ಬೆಳಿಗ್ಗೆಯೇ ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್ ನಾಡದೇವತೆಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ತಮ್ಮ ಮೆಚ್ಚಿನ ನಟನನ್ನು ನೋಡಲು ಜನರ ನೂಕುನುಗ್ಗಲು ಉಂಟಾಗಿತ್ತು. ಕೊನೆಗೆ ಕಿಚ್ಚ ಎಲ್ಲರತ್ತ ಕೈ ಬೀಸಿ ಮುನ್ನಡೆದರು.ನಿನ್ನೆಯಷ್ಟೇ ಹುಟ್ಟುಹಬ್ಬ ಖಾಗಿಯಾಗಿ ಆಚರಿಸಿದ್ದ ಸುದೀಪ್ ಇಂದು ಕುಟುಂಬ ಸಮೇತರಾಗಿ ದೇವರ ದರ್ಶನಕ್ಕೆ ಆಗಮಿಸಿ ಆಶೀರ್ವಾದ ಪಡೆದಿದ್ದಾರೆ.