ಚೆನ್ನೈ: ಪೌರತ್ವ ಖಾಯಿದೆ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗುತ್ತಿರುವುದಕ್ಕೆ ತೀವ್ರ ಕಳವಳ ವ್ಯಕ್ತಪಡಿಸಿ ಸೂಪರ್ ಸ್ಟಾರ್ ರಜನೀಕಾಂತ್ ಮಾಡಿದ ಟ್ವೀಟ್ ಒಂದು ಈಗ ಪರ-ವಿರೋಧ ಟೀಕೆಗೆ ಗುರಿಯಾಗಿದೆ.ಯಾವುದೇ ಸಮಸ್ಯೆಗೂ ಹಿಂಸೆ ಪರಿಹಾರವಲ್ಲ. ಏನೇ ವಿರೋಧಗಳಿದ್ದರೂ ಶಾಂತ ರೀತಿಯಿಂದ ಬಗೆಹರಿಸೋಣ. ಪ್ರತಿಭಟನೆ ಮಾಡಿದ ಶಾಂತಿ ಕದಡಬೇಡಿ ಎಂದು ರಜನೀಕಾಂತ್ ತಮಿಳಿನಲ್ಲಿ ಟ್ವೀಟ್ ಮಾಡಿದ್ದರು.ಆದರೆ ಇದಕ್ಕೆ ಕೆಲವರು ತಿರುಗೇಟು ನೀಡಿದ್ದು, ಹಾಗಿದ್ದರೆ ಏನೇ ಮಾಡಿದರೂ ಬಾಯಿ ಮುಚ್ಚಿಕೊಂಡಿರಬೇಕಾ? ರಾಜಕೀಯಕ್ಕಾಗಿ ಎಷ್ಟು ಕೀಳುಮಟ್ಟಕ್ಕೆ