ಬೆಂಗಳೂರು: ಸಂದರ್ಶನವೊಂದರಲ್ಲಿ ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ಗೋ ಸಾಗಣಿಕೆ ಅನುಮಾನದಲ್ಲಿ ಓರ್ವನ ಹತ್ಯೆ ಮಾಡಿ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದೂ ಒಂದೇ ಎಂದು ಇತ್ತೀಚೆಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟಿ ಸಾಯಿ ಪಲ್ಲವಿಗೆ ಈಗ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಬೆಂಬಲ ನೀಡಿದ್ದಾರೆ.ಸಾಯಿ ಪಲ್ಲವಿ ಹೇಳಿಕೆ ಕೆಲವು ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿದೆ. ಈ ಬಗ್ಗೆ ಸಾಯಿ ಪಲ್ಲವಿ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಟೀಕೆಗಳೂ ಬಂದಿವೆ.ಇದರ ಬೆನ್ನಲ್ಲೇ ರಮ್ಯಾ