ಕೃಷ್ಣ ನೀ ಬೇಗನೆ ಬಾರೋ... ಈ ಹಾಡು ಕೇಳಿದರೆ ಸಾಕು ತೊಟ್ಟಿಲಲ್ಲಿ ಮಲಗಿದ್ದ ಕಂದನಿಂದ, ಬದುಕಿನ ಕೊನೆಯಲ್ಲಿರುವ ಜೀವಗಳ ತನಕ ಎಲ್ಲರ ಮನಸ್ಸಿನಲ್ಲೂ ಒಂದು ರೀತಿಯ ಪ್ರಪುಲ್ಲತೆ ಅರಳಿಕೊಳ್ಳುತ್ತದೆ. ಈ ಸಾಲುಗಳನ್ನು ಕೇಳಿ ಆನಂದಿಸದಿರಲು ಯಾರಿಂದ ತಾನೆ ಸಾಧ್ಯ? ಇದೇ ಸಾಲುಗಳನ್ನೀಗ `ರಂಗನಾಯಕಿ’ ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ. ವ್ಯಾಸತೀರ್ಥರ ರಚನೆಯ ಈ ಹಾಡಿಗೆ ಮಣಿಕಾಂತ್ ಕದ್ರಿ ಹೃದಯಕ್ಕೆ ತಾಕುವಂತಾ ಸ್ವರ ಸಂಯೋಜಿಸಿದ್ದಾರೆ.