ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾದಲ್ಲಿ ಪಾತ್ರ ಮಾಡಿರುವ ನಟ ರವಿಶಂಕರ್ ಗೌಡ ಸಿನಿಮಾ ಬಗ್ಗೆ ಹೇಳಿದ ಮಾತು ಪ್ರೇಕ್ಷಕರ ಕುತೂಹಲ ಹೆಚ್ಚಿಸಿದೆ. ವಿಕ್ರಾಂತ್ ರೋಣ ಸಿನಿಮಾದ ಡಬ್ಬಿಂಗ್ ಮುಗಿಸಿದ ರವಿಶಂಕರ್ ಗೌಡ, ಈ ಸಿನಿಮಾ ನೋಡುವಾಗಲೇ ಥ್ರಿಲ್ ಆಗುತ್ತದೆ ಎಂದು ಹಾಡಿಹೊಗಳಿದ್ದಾರೆ.‘ಸಿನಿಮಾ ಪ್ರಾರಂಭವಾದಾಗಿನಿಂದ ಕೊನೆಯವರೆಗೂ ಸೀಟಿನಲ್ಲಿ ಒರಗಿಕೊಳ್ಳಲು ಸಾಧ್ಯವಾಗಿಲ್ಲ, ಕುತೂಹಲದ ಮಹಾಪೂರ. ಗೆಳೆಯ ದೀಪುವಿನ ಅಭಿನಯಕ್ಕೆ ಮನಸೋಲದವರಿಲ್ಲ. ಹೊಸ ಕಲಾವಿದರಾದರು ಅಚ್ಚುಕಟ್ಟಾದ ಅಭಿನಯ. ಅಭಿನಂದನೆಗಳು ನಿರ್ದೇಶಕ