ಮಂಗಳೂರು: ಕಾಂತಾರ ಚಾಪ್ಟರ್ 1 ಶೂಟಿಂಗ್ ಆರಂಭಕ್ಕೂ ಮುನ್ನ ನಟ, ನಿರ್ದೇಶಕ ರಿಷಬ್ ಶೆಟ್ಟಿ ದೈವದ ಮೊರೆ ಹೋಗಿದ್ದಾರೆದೈವ, ಭೂತಕೋಲದ ಬಗ್ಗೆ ಕತೆ ಹೊಂದಿರುವ ಕಾಂತಾರ ಸಿನಿಮಾ ದೇಶದಾದ್ಯಂತ ಹೆಸರು ಮಾಡಿದ ಹಿನ್ನಲೆಯಲ್ಲಿ ರಿಷಬ್ ಇತ್ತೀಚೆಗೆ ಕಾಂತಾರ ಚಾಪ್ಟರ್ 1 ಸಿನಿಮಾ ಘೋಷಣೆ ಮಾಡಿದ್ದರು. ಫಸ್ಟ್ ಲುಕ್ ನಲ್ಲಿ ಭೀಭತ್ಸ ಅವತಾರದಲ್ಲಿ ರಿಷಬ್ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಮೊದಲು ರಿಲೀಸ್ ಆಗಿರುವ ಕಾಂತಾರ ಸಿನಿಮಾಗಿಂತ ಪೂರ್ವ ಕಾಲದ ಕತೆ ಹೇಳಲಾಗುತ್ತದೆ ಎಂದು ರಿಷಬ್ ಹೇಳಿದ್ದರು.