ಹಾಸನ : ಸ್ಯಾಂಡಲ್ವುಡ್ ನಟ ಕಿಚ್ಚ ಸುದೀಪ್ ತಮ್ಮ ಸಾಮಾಜಿಕ ಕಾರ್ಯಗಳಲ್ಲಿ ಸದಾ ಮುಂದಿದ್ದಾರೆ. ಅದಕ್ಕೆಂದೇ ಅವರು ಕಿಚ್ಚ ಸುದೀಪ್ ಚಾರಿಟೇಬಲ್ ಟ್ರಸ್ಟ್ ಸ್ಥಾಪಿಸಿದ್ದು, ಅದರ ಮೂಲಕ ಅಗತ್ಯವಿರುವವರಿಗೆ ಬೇಕಾದ ನೆರವನ್ನು ತಲುಪಿಸುವ ವ್ಯವಸ್ಥೆ ಕೈಗೊಂಡಿದ್ದಾರೆ. ಇತ್ತೀಚೆಗಷ್ಟೇ ಈ ಟ್ರಸ್ಟ್ ಮೂಲಕ ಮಳೆಯಿಂದ ಬೆಳೆ ಕಳೆದುಕೊಂಡ ರೈತರ ಪುತ್ರನೋರ್ವನಿಗೆ ಕಾಲೇಜು ಶಿಕ್ಷಣಕ್ಕೆ ಶುಲ್ಕ ಪಾವತಿಸಲಾಗಿದೆ. ಚಾರಿಟೇಬಲ್ನ ಈ ಕಾರ್ಯಕ್ಕೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ. ಬಿಎಸ್ಸಿ ನರ್ಸಿಂಗ್ ಓದುತ್ತಿದ್ದ ಹಾಸನದ ವಿದ್ಯಾರ್ಥಿಯೋರ್ವ