ಬೆಂಗಳೂರು: ಪೌರತ್ವ ತಿದ್ದುಪಡಿ ಖಾಯಿದೆಯಲ್ಲಿ ಮುಸ್ಲಿಮರನ್ನು ಹೊರಗಿಟ್ಟಿರುವುದಕ್ಕೆ ದೇಶದಲ್ಲಿ ಪ್ರತಿಭಟನೆಯ ಕಾವೇರುತ್ತಿದ್ದರೆ, ಇತ್ತ ಪ್ರಜಾಕೀಯ ಸಂಸ್ಥಾಪಕ, ರಿಯಲ್ ಸ್ಟಾರ್ ಉಪೇಂದ್ರ ತಮ್ಮದೇ ರೀತಿಯಲ್ಲಿ ಇದಕ್ಕೆ ವ್ಯಾಖ್ಯಾನ ನೀಡಿದ್ದಾರೆ.ಮೊನ್ನೆಯಷ್ಟೇ ಹೈದರಾಬಾದ್ ಎನ್ ಕೌಂಟರ್ ಬಗ್ಗೆ ಪ್ರಶ್ನಿಸಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಕೆಂಗಣ್ಣಿಗೆ ಗುರಿಯಾಗಿದ್ದ ಉಪೇಂದ್ರ ಇಂದು ಪೌರತ್ವ ತಿದ್ದುಪಡಿ ಬಗ್ಗೆ ಪರೋಕ್ಷವಾಗಿ ರಾಜಕೀಯ ಪಕ್ಷಗಳಿಗೆ ಛಾಟಿ ಬೀಸಿದ್ದಾರೆ.ಒಂದು ಪಕ್ಷಕಕ್ಕೆ ಒಂದು ಧರ್ಮ ಓಟ್ ಬ್ಯಾಂಕ್, ಇನ್ನೊಂದು ಪಕ್ಷಕ್ಕೆ ಇನ್ನೊಂದು ಧರ್ಮ ಓಟ್ ಬ್ಯಾಂಕ್.