ಬೆಂಗಳೂರು: ಈಗ ಎಲ್ಲೆಡೆ ಚಾಲೆಂಜಿಂಗ್ ಸ್ಟಾರ್ ದರ್ಶನ್-ಇಂದ್ರಜಿತ್, ಉಮಾಪತಿ ಗೌಡ ನಡುವಿನ ಮಾತಿನ ವಾರ್ ಸದ್ದು ಮಾಡುತ್ತಿದೆ. ಇವರ ವೈಮನಸ್ಯ ಸರಿ ಮಾಡಲು ಚಿತ್ರರಂಗದ ಹಿರಿಯರು ಮನಸ್ಸು ಮಾಡಬೇಕು ಎಂಬ ಸಲಹೆಗಳೂ ಕೇಳಿಬರುತ್ತಿವೆ. ಅದರ ನಡುವೆ ಹಿಂದೊಮ್ಮೆ ಕನ್ನಡದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆಂದು ರವಿಚಂದ್ರನ್ ವಿರುದ್ಧ ಉಂಟಾಗಿದ್ದ ಆಕ್ರೋಶವನ್ನು ಡಾ. ರಾಜ್ ಕುಮಾರ್ ಬಗೆಹರಿಸಿದ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.