ಆದಾಯ ಮೀರಿ ಆಸ್ತಿ: ಈಶ್ವರಪ್ಪ ವಿರುದ್ಧ ಸಿಬಿಐ ತನಿಖೆಗೆ ಆದೇಶ
ವೆಬ್ದುನಿಯಾ|
Last Updated:
ಮಂಗಳವಾರ, 15 ಏಪ್ರಿಲ್ 2014 (10:52 IST)
PR
PR
ಬೆಂಗಳೂರು: ಈಶ್ವರಪ್ಪ ಕೊರಳಿಗೆ ಮತ್ತೊಂದು ಕಂಟಕ ಎದುರಾಗಿದೆ. ಆದಾಯ ಮೀರಿ ಆಸ್ತಿ ಗಳಿಸಿರುವ ಆರೋಪದ ಮೇಲೆ ವಕೀಲ ವಿನೋದ್ ಕೇಸ್ ದಾಖಲು ಮಾಡಿದ್ದರು. ಈ ಹಿನ್ನಲೆಯಲ್ಲಿ ಸಿಬಿಐ ತನಿಖೆಗೆ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ನೀಡಿದ್ದಾರೆ. ಮಾರ್ಚ್ 19ರಂದು ತನಿಖೆಗೆ ನಿರ್ದೇಶನ ನೀಡಲಾಗಿದೆ. ಈ ನಡುವೆ ಈಶ್ವರಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ಮಾಡಿದರು. ನೀವು ಟೀಕೆ ಮಾಡಿ,ನಾವೂ ಟೀಕೆ ಮಾಡ್ತೀವಿ, ಆದರೆ ನಾಲಗೆ ಬಿಗಿ ಹಿಡಿದು ಮಾತನಾಡುವುದು ಒಳ್ಳೆಯದು.