ಕೊರೊನಾ ಹಿನ್ನೆಲೆಯಲ್ಲಿ ಘೊಷಣೆಯಾಗಿದ್ದ ಲಾಕ್ ಡೌನ್ ಸಂಧರ್ಭದಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸಾವಿರಾರು ಕೋಟಿ ರೂ. ನಷ್ಟವಾಗಿದೆ. 1500 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ನಿಗಮದ ಅಧ್ಯಕ್ಷ ಎಂ. ಚಂದ್ರಪ್ಪ ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ಲಾಕ್ ಡೌನ್ ತೆರವಿನ ನಂತರ ಸಂಸ್ಥೆ ಆದಾಯ ನಿರೀಕ್ಷೆ ಮಾಡದೇ ಸೇವಾ ಮನೋಭಾವನೆಯಿಂದ ಕೆಲಸ ಮಾಡುತ್ತಿದೆ ಎಂದರು.ಸಂಸ್ಥೆಗೆ ಆಗಿರುವ ನಷ್ಟ ತುಂಬಿಕೊಡುವ ಹಿನ್ನೆಲೆಯಲ್ಲಿ ಸರ್ಕಾರ 1300 ಕೋಟಿ ರೂಪಾಯಿ ಅನುದಾನ ನೀಡಿದೆ.