ರಾಜ್ಯ ಸಚಿವ ಸಂಪುಟ ಉಪ ಸಮಿತಿಯ ಶಿಫಾರಸ್ಸಿನಂತೆ ಸರ್ಕಾರವು ರಾಜ್ಯದ 195 ತಾಲೂಕುಗಳು ಬರ ಪೀಡಿತ ಎಂದು ಅಧಿಕೃತವಾಗಿ ಘೋಷಣೆ ಮಾಡಿ ಆದೇಶ ಹೊರಡಿಸಿದೆ. ಈ ಸಂಬಂಧ ಕಂದಾಯ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಕೇಂದ್ರ ಸರ್ಕಾರದ ಬರ ಘೋಷಣೆ ಮಾರ್ಗಸೂಚಿಯಲ್ಲಿನ ಮಾನದಂಡಗಳ ಅನ್ವಯ ಒಟ್ಟು 195 ಬರ ತಾಲ್ಲೂಕುಗಳು ಎಂದು ಘೋಷಿಸಲಾಗಿದೆ. ಜಿಲ್ಲಾಧಿಕಾರಿಗಳಿಂದ ಬೆಳೆಹಾನಿಯ ಸಮೀಕ್ಷೆಯ ವರದಿಯ ಅನುಸಾರ 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ