ಮಂಡ್ಯ : ಭಾರೀ ವಿರೋಧದ ನಡುವೆಯೂ ತಮಿಳುನಾಡಿಗೆ ನಿರಂತರವಾಗಿ ನೀರು ಹರಿಸುತ್ತಿರುವ ಕಾರಣ ಕೆಆರ್ಎಸ್ನಲ್ಲಿ ದಿನದಿಂದ ದಿನಕ್ಕೆ ನೀರಿನ ಮಟ್ಟ ಕುಸಿಯುತ್ತಿದೆ. ಕಳೆದ 5 ದಿನಗಳಲ್ಲಿ 2 ಟಿಎಂಸಿ ನೀರು ಖಾಲಿಯಾಗಿದ್ದು, ಜಲಾಶಯದಲ್ಲಿ ಸದ್ಯ 22 ಟಿಎಂಸಿಯಷ್ಟು ಮಾತ್ರ ನೀರು ಉಳಿದಿದೆ. ಬುಧವಾರ ಸುಪ್ರೀಂ ಕೋರ್ಟ್ ಕಾವೇರಿ ನೀರಿನ ಸಂಬಂಧ ವಿಚಾರಣೆ ನಡೆಯಲಿದೆ. ಅಲ್ಲಿಯವರೆಗೂ ತಮಿಳುನಾಡಿಗೆ ನೀರು ಬಿಡುವುದನ್ನು ಮುಂದುವರಿಸಿದರೆ, ಡ್ಯಾಂನಲ್ಲಿ ಒಟ್ಟು 3 ಟಿಎಂಸಿ ನೀರು ಖಾಲಿಯಾಗಲಿದೆ. ಒಂದು