ಕಾರವಾರ : ರಾಜ್ಯದಲ್ಲಿ ಇದುವರೆಗೆ ಮಳೆಗೆ 20 ಜನರು ಬಲಿಯಾಗಿದ್ದು, 40ಕ್ಕೂ ಹೆಚ್ಚು ಜಾನುವಾರುಗಳು ಮೃತಪಟ್ಟಿವೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ. ಜಿಲ್ಲೆಯ ಕುಮಟಾ ತಾಲೂಕಿನ ಬೆಟ್ಕುಳಿ ಗ್ರಾಮದಲ್ಲಿ ಮಾತನಾಡಿದ ಅವರು, ಕರಾವಳಿ ಭಾಗದಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಮಂಗಳೂರು, ಉಡುಪಿ ಜಿಲ್ಲೆಯಲ್ಲೂ ಜಿಲ್ಲಾ ಉಸ್ತುವಾರಿ ಸಚಿವರು ಬೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ. ಮಳೆ ಹಾನಿಗೆ ಸರ್ಕಾರ ಪರಿಹಾರ ಕೊಡಲು ಸಿದ್ದವಿದ್ದು, ಹಾನಿಯಾದ ಮನೆಗಳಿಗೆ 1.25