ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ದದ 2ನೇ ಫೋಕ್ಸೋ ಕೇಸ್ ಹಿನ್ನೆಲೆಯಲ್ಲಿ, ಶಿವಮೂರ್ತಿ ಶರಣರಿಗೆ ಮತ್ತೆ ಬಂಧನದ ವಾರೆಂಟ್ ಕೊಡುವ ಸಂಬಂಧ ಇಂದು ಕೋರ್ಟ್ ತನ್ನ ತೀರ್ಪು ನೀಡಲಿದೆ. ನವೆಂಬರ್ 16ರಂದು ಶಿವಮೂರ್ತಿ ಶರಣರಿಗೆ ಬಂಧನ ವಾರೆಂಟ್ ಹೊರಡಿಸುವಂತೆ ಸರ್ಕಾರಿ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಆದರೆ, ಈಗಾಗಲೇ 2ನೇ ಫೋಕ್ಸೋ ಕೇಸ್ ವಿಚಾರಣೆಗೆ ಹೈ ಕೋರ್ಟ್ ತಡೆಯಾಜ್ಞೆ ನೀಡಿದೆ.