ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೈವೆಯಲ್ಲಿ ದ್ವಿಚಕ್ರ, ತ್ರಿಚಕ್ರ, ಟ್ರ್ಯಾಕ್ಟರ್ ಮುಂತಾದ ವಾಹನಗಳಿಗೆ ನಿಷೇಧ ಹೇರಲಾಗಿತ್ತು. ಈ ಹಿನ್ನೆಲೆ ಎರಡನೇ ದಿನವೂ ಪೊಲೀಸರ ಕಾರ್ಯಾಚರಣೆ ಮುಂದುವರೆದಿದೆ. ದಶಪಥ ಹೆದ್ದಾರಿಗೆ ನಿಷೇಧಿತ ವಾಹನಗಳು ಎಂಟ್ರಿ ಆಗದಂತೆ ಕ್ರಮ ಕೈಗೊಳ್ಳಲಾಗಿದೆ. ನಿಯಮ ಉಲ್ಲಂಘಿಸಿ ದಶಪಥ ಹೆದ್ದಾರಿಯಲ್ಲಿ ಸಂಚರಿಸುವ ಬೈಕ್ ಸವಾರರಿಗೆ ದಂಡದ ಬಿಸಿ ಹೆಚ್ಚಾಗಲಿದ್ದು, ರಾಮನಗರ ಜಿಲ್ಲಾ ವ್ಯಾಪ್ತಿಯ ಎಲ್ಲಾ ಎಂಟ್ರಿ ಎಕ್ಸಿಟ್ಗಳ ಬಳಿ ಕಾರ್ಯಾಚರಣೆ ನಡೆಸಲಾಗಿದೆ. ಬಹುತೇಕ ದ್ವಿಚಕ್ರ , ತ್ರಿಚಕ್ರ ವಾಹನಗಳು ಸರ್ವಿಸ್