ಡಾ. ರಾಜ್ ರ ‘ಬಂಗಾರದ ಮನುಷ್ಯ’ ಚಿತ್ರ ತೆರೆಕಂಡು ಇಂದಿಗೆ 50 ವರ್ಷ ಪೂರೈಸಿದೆ. ಅರ್ಧ ಶತಮಾನ ಕಳೆದರೂ ಕೂಡ ಈ ಚಿತ್ರದ ಚಾರ್ಮ್ ಕಡಿಮೆ ಆಗಿಲ್ಲ. ಇಂದಿಗೂ ಕೂಡ ಸಿನಿಪ್ರಿಯರ ಸಂವಾದದಲ್ಲಿ ‘ಬಂಗಾರದ ಮನುಷ್ಯ’ ಚಿತ್ರ ಪ್ರಸ್ತುತವಾಗಿ ಉಳಿದುಕೊಂಡಿದೆ. ‘ಬಂಗಾರದ ಮನುಷ್ಯ’ ಸಿನಿಮಾವನ್ನು ನಿರ್ದೇಶನ ಮಾಡಿದವರು ಎಸ್. ಸಿದ್ದಲಿಂಗಯ್ಯ. ಟಿ.ಕೆ. ರಾಮರಾವ್ ಬರೆದ ‘ಬಂಗಾರದ ಮನುಷ್ಯ’ ಕಾದಂಬರಿ ಆಧರಿಸಿ ಈ ಸಿನಿಮಾ ಸಿದ್ಧಗೊಂಡಿತ್ತು. ರಾಜ್ಕುಮಾರ್, ಭಾರತಿ, ಬಾಲಕೃಷ್ಣ, ಶ್ರೀನಾಥ್,