ಮುಂಬರುವ ರಾಜ್ಯ ಉಪ ಚುನಾವಣೆಯಲ್ಲಿ ಬಹುತೇಕ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳೇ ಗೆಲುವು ಸಾಧಿಸುತ್ತಾರೆ. ಕಾಂಗ್ರೆಸ್ ಬಹುಮತ ಗಳಿಸುತ್ತದೆ ಎಂದು ಮಾಜಿ ಸಚಿವ ಯು.ಟಿ. ಖಾದರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿ, ಸುಪ್ರೀಂ ಕೋರ್ಟ್ ಅನರ್ಹ ಅಂತ ತೀರ್ಪು ಕೊಟ್ಟು ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಿದೆ. ಅಂಥವರು ಜನರಿಗೆ ಬೇಕಾ? ಎನ್ನುವುದನ್ನು ಜನರೇ ನಿರ್ಧರಿಸುತ್ತಾರೆ. ಹಣ ಪಡೆದ ಅನರ್ಹರಿಗೆ ಮತದಾರರು ತಕ್ಕ ಪಾಠ ಕಲಿಸುತ್ತಾರೆ. ನಾವೆಲ್ಲಾ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲುವಿಗೆ