ಬೆಳಗಾವಿಯ ಜಿಲ್ಲಾಧಿಕಾರಿ ಅಧಿಕೃತ ನಿವಾಸದ ಹಿಂದಿರುವ ಕ್ವಾರ್ಟರ್ಸ್ನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಸಾರ್ವಜನಿಕರಲ್ಲಿ ಆತಂಕ ಎದುರಾಗಿದೆ. ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಪೊಲೀಸರಿಂದ ಶೋಧ ಕಾರ್ಯಾಚರಣೆ ಮುಂದುವರಿದಿದೆ. ವಿಶ್ವೇಶ್ವರಯ್ಯ ನಗರದಲ್ಲಿ ನಿನ್ನೆ (ಆ.5) ಸಂಜೆ ಚಿರತೆ ಕಾಣಿಸಿಕೊಂಡಿತು. ಅಲ್ಲದೆ, ಜಾಧವ್ ನಗರದಲ್ಲೂ ಪ್ರತ್ಯಕ್ಷವಾದ್ದರಿಂದ ಚಿರತೆ ಸೆರೆಗೆ ಅರಣ್ಯ ಇಲಾಖೆ ಎರಡೂ ಕಡೆ ಬೋನು ಅಳವಡಿಸಿದೆ. ಇದರ ಜೊತೆಗೆ ಮನೆಯಿಂದ ಯಾರು ಹೊರ ಬರದಂತೆ ಮೈಕ್ ನಲ್ಲಿ