ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಚಿರತೆ ಹಾವಳಿ ಶುರುವಾಗಿದೆ. ಮೈಸೂರು, ಬೆಳಗಾವಿಯಲ್ಲಿ ಆರ್ಭಟಿಸುತ್ತಿದ್ದ ಚಿರತೆಗಳು, ಇದೀಗ ಸಿಲಿಕಾನ್ ಸಿಟಿಗೆ ಲಗ್ಗೆ ಇಟ್ಟಿವೆ. ಬೆಂಗಳೂರು ನಗರದ ನಾಲ್ಕು ಪ್ರದೇಶಗಳಲ್ಲಿ ಚಿರತೆಗಳು ಕಾಣಸಿಕ್ಕಿವೆ. ಹೀಗಾಗಿ, ಬೆಂಗಳೂರು ನಗರದ ಹೊರ ವಲಯದ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಕೆಂಗೇರಿ, ಕುಂಬಳಗೋಡು, ದೇವನಹಳ್ಳಿ, ಚಿಕ್ಕಜಾಲ, ತುರಹಳ್ಳಿ ಅರಣ್ಯ ಸೇರಿದಂತೆ ಹಲವೆಡೆ ಚಿರತೆಗಳು ಕಾಣ ಸಿಕ್ಕಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಹೀಗಾಗಿ, ಅರಣ್ಯ ಇಲಾಖೆ ಹೈ ಅಲರ್ಟ್ ಆಗಿದೆ. ಈ