ಗದಗದಲ್ಲೂ ಬೆಳ್ಳಂ ಬೆಳ್ಳಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಶಾಕ್ ನೀಡಿದ್ದಾರೆ. ಜಂಟಿ ಕೃಷಿ ನಿರ್ದೇಶಕ ಟಿ.ಎಸ್ ರುದ್ರೇಶಪ್ಪ ಮನೆ ಮೇಲೆ ಸುಮಾರು 8ಕ್ಕೂ ಹೆಚ್ಚು ಸಿಬ್ಬಂದಿಯಿಂದ ದಾಳಿ ನಡೆಸಲಾಗಿದೆ. ನಗರದ ಹುಡ್ಕೋ ಕಾಲೋನಿಯಲ್ಲಿರುವ ಮನೆ ಸೇರಿದಂತೆ ಅಧಿಕಾರಿ ರುದ್ರೇಶಪ್ಪಗೆ ಸಂಬಂಧಿಸಿದ ಐದು ಕಡೆ ಮನೆಗಳಲ್ಲಿ ಎಸಿಬಿ ಅಧಿಕಾರಿಗಳ ತಂಡಗಳು ಪರಿಶೀಲನೆ ನಡೆಸುತ್ತಿದ್ದಾರೆ. ಜೊತೆಗೆ ರುದ್ರೇಶ್ರನ್ನ ಪಕ್ಕದಲ್ಲೇ ಕೂರಿಸಿಕೊಂಡು, ಅವರ ಮನೆಯಲ್ಲಿ ದೊರೆತ ಕಡತಗಳು, ಕಂಪ್ಯೂಟರ್ ದಾಖಲೆಗಳನ್ನ ಪರಿಶೀಲಿಸುತ್ತಿದ್ದಾರೆ. ಗದಗ