ಮಂಡ್ಯ : ಸ್ಯಾಂಡಲ್ ವುಡ್ ನ ಹಿರಿಯ ನಟ ಅಂಬರೀಶ್ ನಿಧನರಾದ ಹಿನ್ನಲೆಯಲ್ಲಿ ಅವರ ಅಭಿಮಾನಿಯೊಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಡ್ಯ ಜಿಲ್ಲೆ, ಮದ್ದೂರು ತಾಲೂಕಿನ, ಹೊಟ್ಟೆ ಗೌಡನದೊಡ್ಡಿ ಗ್ರಾಮದ ತಮ್ಮಯ್ಯ ಆತ್ಮಹತ್ಯೆ ಮಾಡಿಕೊಂಡ ಅಂಬರೀಶ್ ಅಭಿಮಾನಿ. ಅಂಬರೀಶ್ ಅವರು ನಿಧನರಾದ ಸುದ್ಧಿ ತಿಳಿಯುತ್ತಲೇ ತಮ್ಮಯ್ಯ ನೋವು ತಡೆಯಲಾರದೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನಿಗೆ ಹೆಂಡತಿ ಹಾಗೂ ಇಬ್ಬರು ಮಕ್ಕಳಿರುವುದಾಗಿ ತಿಳಿದುಬಂದಿದೆ. ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್