ರಾಜ್ಯದಲ್ಲಿ ಚುನಾವಣೆಗೆ ದಿನಗಣನೆ ಶುರುವಾಗುತ್ತಲೆ ಕೇಸರಿ ಪಡೆಯಲ್ಲಿ ಸಂಚಲನ ಶುರುವಾಗ್ತಿದೆ. ಕರ್ನಾಟಕದಲ್ಲಿ ಮತ್ತೆ ಬಿಜೆಪಿಯನ್ನ ಅಧಿಕಾರಕ್ಕೆ ತರಬೇಕಂತಾ ಪ್ರಧಾನಿ ಮೋದಿ, ಅಮಿತ್ ಶಾ ಮತ್ತೆ ರಾಜ್ಯ ಪ್ರವಾಸಕ್ಕೆ ಸಿದ್ದತೆ ನಡೆಸಿದ್ದಾರೆ. ನಿನ್ನೆ ತಡರಾತ್ರಿಯವರೆಗೂ ರಾಜ್ಯ ನಾಯಕರು ವಿಸ್ತಾರಕರು ಸೇರಿದಂತೆ ಪ್ರಮುಖ ನಾಯಕರ ಜೊತೆ ಅಮಿತ್ ಶಾ ಸಭೆ ಮೇಲೆ ಸಭೆ ಮಾಡಿ ಸದ್ಯ ರಾಜ್ಯದ ಎಲೆಕ್ಷನ್ ಟ್ರೆಂಡ್ ಬಗ್ಗೆ ಮಾಹಿತಿ ಪಡೆದು ರಾಜ್ಯ ನಾಯಕರಿಗೆ ಟಾಸ್ಕ್ ಗಳನ್ನ ನೀಡಿದ್ದಾರೆ. ಜೊತೆಗೆ ಕೊನೆ ಸಮಯದಲ್ಲಿ ಅಮಿತ್ ಶಾ ಸಿಎಂ ಬೊಮ್ಮಾಯಿ ಸಭೆ ಸಾಕಷ್ಟು ಕುತೂಹಲ ಮೂಡಿಸಿದೆ.