ಬೆಂಗಳೂರು: ಶಾಸಕ ಹ್ಯಾರಿಸ್ ಪುತ್ರನ ಗೂಂಡಾಗಿರಿ ಪ್ರಕರಣ ಮಾಸುವ ಮೊದಲೇ ಅಂತಹದ್ದೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಕಾಂಗ್ರೆಸ್ ಶಾಸಕ ಬೈರತಿ ಬಸವರಾಜು ಆಪ್ತ, ಕೆಆರ್ ಪುರಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾರಾಯಣ ಸ್ವಾಮಿ ಸರ್ಕಾರಿ ಕಚೇರಿಗೆ ಬಂದು ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಲು ಯತ್ನಿಸಿದ ಘಟನೆ ನಡೆದಿದೆ.ಬಿಬಿಎಂಪಿ ಕಚೇರಿಗೆ ಬಂದು ಜಮೀನಿಗೆ ಅಕ್ರಮವಾಗಿ ಖಾತೆ ಮಾಡಿಕೊಡುವಂತೆ ಬಿಬಿಎಂಪಿ ಅಧಿಕಾರಿಗೆ ಒತ್ತಡ ಹಾಕಿದ್ದಾರೆ. ಆದರೆ ಅದಕ್ಕೆ ಅಧಿಕಾರಿಗಳು