ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಬಣದಲ್ಲಿ ಗುರುತಿಸಿಕೊಂಡಿದ್ದ ಕೊಪ್ಪಳದ ಬಸವರಾಜರಾಯರೆಡ್ಡಿ ಬಿಜೆಪಿ ಸೇರಲಿದ್ದಾರೆ ಎಂಬ ವದಂತಿಗಳು ಕೇಳಿಬರುತ್ತಿದೆ. ಬಸವರಾಜರಾಯರೆಡ್ಡಿಯವರು ಕಲಬುರಗಿ ಕ್ಷೇತ್ರದಿಂದ ಶಾಸಕರಾಗಿ ಸಿದ್ದರಾಮಯ್ಯ ಸಂಪುಟದಲ್ಲಿ ಉನ್ನತ ಶಿಕ್ಷಣ ಖಾತೆ ಸಚಿವರಾಗಿ ಕೆಲಸ ಮಾಡಿದ್ದರು. ಪದೇ ಪದೇ ಕಾಂಗ್ರೆಸ್ ಪರವಾಗಿ ಪತ್ರಿಕಾಗೋಷ್ಠಿಗಳನ್ನು ಮಾಡಿ ಕೇಂದ್ರ ಸರ್ಕಾರದ ನೀತಿಗಳನ್ನು ಖಂಡಿಸುತ್ತಿದ್ದರು. ಮಾಧ್ಯಮಗಳಲ್ಲೂ ರಾಷ್ಟ್ರೀಯ ವಿಚಾರಗಳೇ ಕುರಿತು ಹೆಚ್ಚು ಮಾತನಾಡುತ್ತಿದ್ದರು. ಕಳೆದ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದ್ದ ಅವರು