ಸಾಕಷ್ಟು ವಿವಾದ ಸೃಷ್ಟಿಸಿರುವ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದ ಇದೀಗ ಮತ್ತೆ ಭುಗಿಲೆದ್ದಿದೆ. ಜಾಮಿಯಾ ಮಸೀದಿಯ ಒಳಭಾಗದಲ್ಲಿ ನಡೆಯುತ್ತಿರುವ ಮದರಸಾ ತೆರವಿಗೆ ಹಿಂದೂ ಜಾಗರಣ ವೇದಿಕೆ ಮಂಡ್ಯ ಜಿಲ್ಲಾಡಳಿತಕ್ಕೆ ಗಡುವು ನೀಡಿದೆ. ಐತಿಹಾಸಿಕ ಸ್ಥಳವಾಗಿರುವ ಜಾಮಿಯಾ ಮಸೀದಿ ಅಲ್ಲ, ಅದು ಮಂದಿರ ಎಂದು ಅತ್ತ ಬಜರಂಗಸೇನೆ ಹೈಕೋರ್ಟ್ ಮೆಟ್ಟಿಲೇರುವ ಮೂಲಕ ಕಾನೂನು ಹೋರಾಟವನ್ನು ಆರಂಭಿಸಿದೆ. ಇತ್ತ ಹಿಂದೂ ಜಾಗರಣ ವೇದಿಕೆ ಮಸೀದಿಯಲ್ಲಿ ಅಕ್ರಮವಾಗಿ ನಡೆಯುತ್ತಿರುವ ಮದರಸಾ ತೆರವಿಗೆ