ಮುಂಬೈನಿಂದ ಬಂದು ಕೊರೊನಾ ತಡೆಗಾಗಿ ಇರುವ ಕ್ವಾರಂಟೈನ್ ನಲ್ಲಿರುವ ಕನ್ನಡಿಗರ ಕಷ್ಟ, ಸುಖವನ್ನು ಈ ಅಧಿಕಾರಿ ಕೇಳಿದ್ದಾರೆ. ಕೃಷ್ಣರಾಜಪೇಟೆ ತಾಲ್ಲೂಕಿನ ಗಡಿ ಗ್ರಾಮವಾದ ಕಿಕ್ಕೇರಿ ಹೋಬಳಿಯ ಮಾದಾಪುರ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿದ್ದ ಮಂಡ್ಯ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್, ಸಾಂಸ್ಥಿಕ ಹೋಂ ಕ್ವಾರಂಟೈನ್ ಆಗಿರುವ 250 ಕ್ಕೂ ಹೆಚ್ಚಿನ ಮುಂಬೈ ಕನ್ನಡಿಗರ ಆರೋಗ್ಯ ವಿಚಾರಿಸಿದ್ದಾರೆ.ಮುಂಬೈ ಹಾಗೂ ನಮ್ಮ ಮಂಡ್ಯದ ಊಟ, ತಿಂಡಿಗಳ ಆಹಾರದ ರುಚಿಯಲ್ಲಿ ತುಂಬಾ ವ್ಯತ್ಯಾಸವಿದೆ.