ಬೆಂಗಳೂರು: ದಲಿತ ಸಂಘಟನೆ ಮುಖಂಡ ಮತ್ತು ಬಿಜೆಪಿ ಎಸ್ಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಚಿ.ನಾ.ರಾಮು ಪುತ್ರನ ವಿರುದ್ಧ ಪೊಲೀಸರ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಚಿ.ನಾ.ರಾಮು ಪುತ್ರ ಕಾರ್ಲ್ ಮಾರ್ಕ್ಸ್ ಸೇರಿದಂತೆ ನಾಲ್ವರನ್ನ ಮಲ್ಲೇಶ್ವರಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಘಟನೆ ಏನು…?ನಿನ್ನೆ ರಾತ್ರಿ ಬಾರ್ ಸಿಬ್ಬಂದಿ ಜತೆ ಕಾರ್ಲ್ ಮಾರ್ಕ್ಸ್ ಜಗಳ ಆಡುತ್ತಿರುವಾಗ ಪೊಲೀಸರು ಬಿಡಿಸಲು ಬಂದಿದ್ದಾರೆ. ಈ ವೇಳೆ ಪೊಲೀಸರ ಬಳಿಯಿದ್ದ ಲಾಠಿ