ಬೆಂಗಳೂರು : ಕಾಲೇಜಿಗೆ ಕಾರಿನಲ್ಲಿ ಬರುತ್ತಿದ್ದ ಸಹಪಾಠಿ ಶ್ರೀಮಂತನೆಂದು ಭಾವಿಸಿ ಆತನನ್ನು ಅಪಹರಿಸಿ 1.20 ಲಕ್ಷ ರು ಸುಲಿಗೆ ಮಾಡಿದ್ದ ಮೂವರು ವಿದ್ಯಾರ್ಥಿಗಳು ಸೇರಿದಂತೆ ಆರು ಮಂದಿಯನ್ನು ಅನ್ನ ಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.