ತಮ್ಮ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ವಿಧಾನ ಪರಿಷತ್ಗೆ ಆಟೋರಿಕ್ಷಾ ಅಥವಾ ಕ್ಯಾಬ್ ಡ್ರೈವರ್ ಪ್ರತಿನಿಧಿಯನ್ನು ನಾಮನಿರ್ದೇಶನ ಮಾಡುವುದಾಗಿ ಜೆಡಿಎಸ್ ಪಕ್ಷದ ರಾಜ್ಯಾದ್ಯಕ್ಷ ಹೆಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಚಿತ್ರರಂಗದ ಪ್ರತಿನಿಧಿಯನ್ನು ಈ ಹುದ್ದೆಗೆ ನಾಮಕರಣ ಮಾಡುವ ಬದಲು ತಮ್ಮ ಸರ್ಕಾರ ಅಂತಹ ಅವಕಾಶವನ್ನು ವಾಹನ ಚಾಲಕರಿಗೆ ನೀಡಲಿದೆ ಎಂದು ತಿಳಿಸಿದ್ದಾರೆ. ಮುಂಬರುವ ಚುನಾವಣೆಗಳಲ್ಲಿ ಜೆಡಿಎಸ್ ಗೆಲುವು ಸಾಧಿಸಿದರೆ, ಆಟೋರಿಕ್ಷಾ, ಕ್ಯಾಬ್ ಮತ್ತು ಲಾರಿ ಡ್ರೈವರ್ಗಳಿಗಾಗಿ ಓಲಾ ಮತ್ತು ಊಬರ್ನಂತಹ