ಯಾದಗಿರಿ - ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಅದ್ದೂರಿ ಶೋಭಾಯಾತ್ರೆ ನಡೆದಿದೆ.. ಈ ವೇಳೆ ಅಯ್ಯಪ್ಪ ಮಾಲಾಧಾರಿಗಳು ವಿಭಿನ್ನವಾಗಿ ಹರಕೆ ತೀರಿಸಿದ್ದಾರೆ.. ಅಯ್ಯಪ್ಪ ಪೂಜೆಯ ವೇಳೆ ಕೊತ ಕೊತ ಕುದಿಯುವ ಎಣ್ಣೆಯಲ್ಲಿ ಕೈ ಹಾಕಿ ಮಿರ್ಚಿ ತೆಗೆಯುವ ದೃಶ್ಯಗಳು ನೆರದಿದ್ದ ಭಕ್ತರನ್ನು ಮೈ ಜುಮ್ ಎನ್ನಿಸುವಂತೆ ಮಾಡಿತ್ತು. ಸಾವಿರಾರು ಭಕ್ತರ ಸಮ್ಮುಖದಲ್ಲಿ ಕುದಿಯುವ ಎಣ್ಣೆಗೆ ಕೈ ಹಾಕಿ ಕಜ್ಜಾಯ ತೆಗೆದರು.