ಬೆಂಗಳೂರು : ಸಚಿವ ಸಂಪುಟ ವಿಸ್ತರಣೆ ಮೈತ್ರಿ ಸರ್ಕಾರಕ್ಕೆ ಇದೀಗ ತಲೆನೋವಾಗಿ ಪರಿಣಮಿಸಿದೆ. ಕಾರಣ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾದ ಹಿರೇಕೇರೂರ್ ಕಾಂಗ್ರೆಸ್ ಶಾಸಕ ಬಿಸಿ ಪಾಟಿಲ್ ಅವರು ಸಚಿವ ಸ್ಥಾನ ಬೇಕೇ ಬೇಕು ಎಂದು ಒತ್ತಡ ಹೇರುತ್ತಿದ್ದಾರೆ. ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಮುಂದೂಡಿಕೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು ನಿಜ. ಇದೀಗ ಸಂಪುಟ ವಿಸ್ತರಣೆಯನ್ನು ನವೆಂಬರ್ 15ರ ನಂತರ ಮಾಡುತ್ತೇವೆ