ಬೆಂಗಳೂರು : ಸಚಿವ ಸಂಪುಟ ವಿಸ್ತರಣೆ ಮೈತ್ರಿ ಸರ್ಕಾರಕ್ಕೆ ಇದೀಗ ತಲೆನೋವಾಗಿ ಪರಿಣಮಿಸಿದೆ. ಕಾರಣ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾದ ಹಿರೇಕೇರೂರ್ ಕಾಂಗ್ರೆಸ್ ಶಾಸಕ ಬಿಸಿ ಪಾಟಿಲ್ ಅವರು ಸಚಿವ ಸ್ಥಾನ ಬೇಕೇ ಬೇಕು ಎಂದು ಒತ್ತಡ ಹೇರುತ್ತಿದ್ದಾರೆ.