ಬೆಂಗಳೂರು : ಕೊನೆಗೂ ಬಿಬಿಎಂಪಿ ಕುಂಭಕರ್ಣ ನಿದ್ರೆಯಿಂದ ಎದ್ದಂತೆ ಕಾಣುತ್ತಿದೆ. ನಗರದ ರಸ್ತೆ ಗುಂಡಿಗಳಿಗೆ ಬಿದ್ದು ಅನಾಹುತಗಳು ಸಾವು-ನೋವು ವರದಿಯಾಗುತ್ತಿದ್ದಂತೆ ಜನರು ಪಾಲಿಕೆಗೆ ಹಿಡಿಶಾಪ ಹಾಕುತ್ತಿರುವುದರಿಂದ ಎಚ್ಚೆತ್ತಂತೆ ಕಾಣುತ್ತಿದೆ.