ಕಾರವಾರ : ಈ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣಕ್ಕೆ ವಿದೇಶಿ ಪ್ರಜೆಗಳ ದಂಡೇ ಹರಿದುಬರುತಿತ್ತು. ಬೀಚ್ನಲ್ಲಿ ಅರೆಬರೆ ಬಟ್ಟೆ ತೊಟ್ಟು ಮೋಜು-ಮಸ್ತಿಯಲ್ಲಿ ನಿರತರಾಗುತಿದ್ದ ವಿದೇಶಿಗರು, ಕೊರೊನಾ ನಂತರ ಭಿಕ್ಷೆ ಬೇಡುವುದು ಹಾಗೂ ವ್ಯಾಪಾರ ಮಾಡಲು ಇದೀಗ ಗೋಕರ್ಣದತ್ತ ಬರುತ್ತಿದ್ದಾರೆ.ಹೌದು, ಇದು ಆಶ್ಚರ್ಯ ಎನಿಸಿದರೂ ಸತ್ಯ. ಈ ಹಿಂದೆ ಸಾವಿರಾರು ಸಂಖ್ಯೆಯಲ್ಲಿ ವಿದೇಶಿಗರು ಗೋಕರ್ಣಕ್ಕೆ ಬಂದು ವರ್ಷಗಟ್ಟಲೇ ನೆಲೆಸಿ ಎಂಜಾಯ್ ಮಾಡುತಿದ್ದರು. ಇದರಿಂದಾಗಿ ಗೋಕರ್ಣದ ಹೋಮ್ ಸ್ಟೇ, ರೆಸಾರ್ಟ್ಗಳಿಗೆ ಉತ್ತಮ